*  ರಾಜಧಾನಿಯಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದಾರೆ.* ದೇಶದಾದ್ಯಂತ ಸಂಭ್ರಮದ 78ನೇ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15ರಂದು ರಾಜಧಾನಿಯಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದಾರೆ.* ಈ ಹಿಂದೆ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ “ಅವರು 17 ಬಾರಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 16 ಬಾರಿ ರಾಷ್ಟ್ರಧ್ವಜಾರೋಹಣ. ನೆರವೇರಿಸಿದ್ದರು.ಮನಮೋಹನ್ ಸಿಂಗ್ ಅವರು ಸತತ 10 ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದ್ದರು.* ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶ ಎಂದು ಚಿರಋಣಿಯಾಗಿದ್ದು ಅವರ ತ್ಯಾಗ ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ' ಎಂದು ಹೇಳಿದ್ದಾರೆ.* ವಯನಾಡ್ ಸೇರಿದಂತೆ ನೈಸರ್ಗಿಕ ವಿಕೋಪಗಳ ಕುರಿತು ಉಲ್ಲೇಖ ಮಾಡಿರುವ ಪ್ರಧಾನಿ ಮೋದಿ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ' ಎಂದು ಹೇಳಿದ್ದಾರೆ. * ವಿಕಸಿತ ಭಾರತ ಕೇವಲ ಒಂದು ಪದವಲ್ಲ. 140 ಕೋಟಿ ಭಾರತೀಯರ ಸಂಕಲ್ಪ ಮತ್ತು ಕನಸುಗಳ ಪ್ರತಿಬಿಂಬವಾಗಿದೆ' ಎಂದು ಅವರು ತಿಳಿಸಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವನ್ನಾಗಿ ಮಾಡುವ ನಮ್ಮ ಸಂಕಲ್ಪಕ್ಕೆ ಬದ್ದರಾಗಿದ್ದೇವೆ' ಎಂದು ಅವರು ತಿಳಿಸಿದ್ದಾರೆ.* ಜಲ ಜೀವನ್ ಮಿಷನ್ 15 ಕೋಟಿ ಫಲಾನುಭವಿಗಳನ್ನು ತಲುಪಿದೆ ಎಂದು ಅವರು ಮಾಹಿತಿ ನೀಡಿದರು. ಸುಮಾರು 10 ಕೋಟಿ ಮಹಿಳೆಯರು ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದನ್ನು ನೋಡಿ ನಾವು ಹೆಮ್ಮೆಪಡುತ್ತೇವೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.* ವಿದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಲಕ್ಷ ಕೋಟಿ ಖರ್ಚು ಮಾಡುತ್ತಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ನಾವು 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬಾರದಂತಹ ಶಿಕ್ಷಣ ವ್ಯವಸ್ಥೆಯನ್ನು ದೇಶದಲ್ಲಿ ರಚಿಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.