* ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷರಾದ ಕೆ ಚಂದ್ರಶೇಖರ್ ರಾವ್ ಅವರನ್ನು ಡಿಸೆಂಬರ್ 16 ರಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.* 39 ಶಾಸಕರನ್ನು ಹೊಂದಿರುವ ಭಾರತ ರಾಷ್ಟ್ರ ಸಮಿತಿಯು ವಿಧಾನ ಸಭೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿದ್ದು, ಆ ಪಕ್ಷದ ನಾಯಕ ಚಂದ್ರಶೇಖರ ರಾವ್ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲಾಗಿದೆ' ಎಂದು ಸಭಾಧ್ಯಕ್ಷ ಗಡ್ಡಂ ಪ್ರಸಾದ್ ಕುಮಾರ್ ಅವರು ಸದನದಲ್ಲಿ ಪ್ರಕಟಿಸಿದರು.* ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳಲ್ಲಿ 64 ಸ್ಥಾನಗಳನ್ನು ಗೆದ್ದುಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರವನ್ನು ಪಡೆದುಕೊಂಡಿತು, ಆದರೆ ಅದರ ಚುನಾವಣಾ ಪೂರ್ವ ಮೈತ್ರಿಕೂಟದ ಸಿಪಿಐ ಒಂದು ಸ್ಥಾನವನ್ನುಗಳಿಸಿತು.