* ತೆಲಂಗಾಣದ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.     * ಶಾಸಕ ಗಡ್ಡಂ ಪ್ರಸಾದ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಹೈಕಮಾಂಡ್ ನಾಮನಿರ್ದೇಶನ ಮಾಡಿತು. ದಲಿತ ನಾಯಕರಾಗಿರುವ ಪ್ರಸಾದ್ ಅವರ ರಾಜಕೀಯ ಅನುಭವವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಕೊಳ್ಳಲಾಗಿದೆ. * ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ನೂತನ ಸ್ಪೀಕರ್ ಗಡ್ಡಂ ಪ್ರಸಾದ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.* ಇತ್ತೀಚಿನ ಚುನಾವಣೆಯಲ್ಲಿ ವಿಕಾರಾಬಾದ್ ಕ್ಷೇತ್ರದಿಂದ ಆಯ್ಕೆಯಾದ ಪ್ರಸಾದ್ ಅವರು, ಆಂಧ್ರಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.* ಪ್ರಸಾದ್ ಕುಮಾ‌ರ್ ಅವರು ವಿಕಾರಾಬಾದ್ ಜಿಲ್ಲೆಯನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.* ಪ್ರಸಾದ್ ಕುಮಾರ್ ಅವರು ಎಂಪಿಟಿಎಸ್ ಸದಸ್ಯರಾಗಿ ತಮ್ಮ ರಾಜಕೀಯ ವ್ಯತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 2008 ರಲ್ಲಿ ವಿಧಾನಸಭಾ ಉಪಚುನಾವಣೆಯಲ್ಲಿ ಗೆದ್ದು 2009 ರಲ್ಲಿ ಪುನರಾಯ್ಕೆಗೊಂಡು ಸಚಿವರಾದರು. ಇತ್ತೀಚಿನ ಚುನಾವಣೆಯಲ್ಲಿ ವಿಕಾರಾಬಾದ್‌ನಿಂದ ಮತ್ತೂಮ್ಮೆ ಆಯ್ಕೆಯಾಗಿದ್ದರು.