Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
ಉಪ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇಮಕ
Authored by:
Yallamma G
Date:
25 ಜೂನ್ 2024
* ಕರ್ನಾಟಕ ಉಪ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ (B Veerappa) ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ನ್ಯಾಯಮೂರ್ತಿಯಾಗಿದ್ದ ವೀರಪ್ಪ ಅವರು ಭ್ರಷ್ಟಾಚಾರ ನಿಗ್ರಹದಳ(ಎಸಿಬಿ)ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು.
* ಬಿ. ವೀರಪ್ಪ ಅವರು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಪಿಎಸ್ಐ ನೇಮಕಾತಿ ಹಗರಣದ ತನಿಖಾ ವರದಿ ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಸಿದ್ದರು. ಇದೀಗ ವೀರಪ್ಪ ಅವರನ್ನೇ ರಾಜ್ಯ ಸರ್ಕಾರ, ಕರ್ನಾಟಕ ಉಪ ಲೋಕಾಯುಕ್ತರನ್ನಾಗಿ ನೇಮಿಸಿದೆ.
* ಕರ್ನಾಟಕ ರಾಜ್ಯ ಪ್ರಸ್ತುತ ಲೋಕಾಯುಕ್ತರು ಭೀಮನಗೌಡ ಸಂಗನಗೌಡ ಪಾಟೀಲ್.
* ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 1961ರ ಜೂನ್ 1ರಂದು ಜನಿಸಿದ್ದ ವೀರಪ್ಪ, ರೇಣುಕಾಚಾರ್ಯ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು 1988ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 1995 ರಿಂದ 2015 ವಕೀಲರಾಗಿ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
* 2015 ಜನವರಿಯಲ್ಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯ ಮೂರ್ತಿಯಾಗಿ ನೇಮಕಗೊಂಡಿದ್ದ ವೀರಪ್ಪ, 2016 ರಿಂದ 2023 ರ ವರೆಗೆ ಹೈಕೋರ್ಟ್ನ ಕಾಯಂ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.
* 2021ರಲ್ಲಿ ಪೊಲೀಸ್ ಸಬ್ - ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಗಳ ಕುರಿತ ತನಿಖೆಗೆ ನೇಮಿಸಿದ್ದ ಆಯೋಗದ ಅಧ್ಯಕ್ಷರೂ ಆಗಿದ್ದರು.
Take Quiz
Loading...