Job Description: * ಕರ್ನಾಟಕ ಉಪ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ (B Veerappa) ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ನ್ಯಾಯಮೂರ್ತಿಯಾಗಿದ್ದ ವೀರಪ್ಪ ಅವರು ಭ್ರಷ್ಟಾಚಾರ ನಿಗ್ರಹದಳ(ಎಸಿಬಿ)ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು.* ಬಿ. ವೀರಪ್ಪ ಅವರು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಪಿಎಸ್ಐ ನೇಮಕಾತಿ ಹಗರಣದ ತನಿಖಾ ವರದಿ ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಸಿದ್ದರು. ಇದೀಗ ವೀರಪ್ಪ ಅವರನ್ನೇ ರಾಜ್ಯ ಸರ್ಕಾರ, ಕರ್ನಾಟಕ ಉಪ ಲೋಕಾಯುಕ್ತರನ್ನಾಗಿ ನೇಮಿಸಿದೆ.* ಕರ್ನಾಟಕ ರಾಜ್ಯ ಪ್ರಸ್ತುತ ಲೋಕಾಯುಕ್ತರು ಭೀಮನಗೌಡ ಸಂಗನಗೌಡ ಪಾಟೀಲ್. * ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 1961ರ ಜೂನ್ 1ರಂದು ಜನಿಸಿದ್ದ ವೀರಪ್ಪ, ರೇಣುಕಾಚಾರ್ಯ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು 1988ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 1995 ರಿಂದ 2015 ವಕೀಲರಾಗಿ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. * 2015 ಜನವರಿಯಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯ ಮೂರ್ತಿಯಾಗಿ ನೇಮಕಗೊಂಡಿದ್ದ ವೀರಪ್ಪ, 2016 ರಿಂದ 2023 ರ ವರೆಗೆ ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. * 2021ರಲ್ಲಿ ಪೊಲೀಸ್ ಸಬ್‌ - ಇನ್‌ಸ್ಪೆಕ್ಟ‌ರ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಗಳ ಕುರಿತ ತನಿಖೆಗೆ ನೇಮಿಸಿದ್ದ ಆಯೋಗದ ಅಧ್ಯಕ್ಷರೂ ಆಗಿದ್ದರು.