KPSC 384 ಗೆಜೆಟೆಡ್‌ ಪ್ರೊಬೇಷನರ್‌(KAS) ಹುದ್ದೆಗಳ ನೇಮಕಾತಿ ಅಧಿಸೂಚನೆ ರದ್ದು
Published by: Yallamma G | Date:6 ಜೂನ್ 2025
Image not found

ಸರ್ಕಾರಿ ನೇಮಕಾತಿ-ಗಳಲ್ಲಿ ಮೀಸಲು ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಆಧಾರದಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಸ್‌ಎಟಿ) ರದ್ದುಪಡಿಸಿದೆ. ಅಧಿಸೂಚನೆಯನ್ನು ಪ್ರಶ್ನಿಸಿ 3 ಎ ಕೆಟಗರಿಗೆ ಸೇರಿದ ಚಿನ್ನಪಟ್ಟಣದ ಎಂ.ಟೆಕ್ ಪದವೀಧರ ಬಿ.ಎನ್. ಮಧು ಸಲ್ಲಿಸಿದ್ದ ಅರ್ಜಿಯನ್ನು ಕೆಎಟಿ ಅಧ್ಯಕ್ಷ ಆರ್.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ರಾಘವೇಂದ್ರ ಔರಾದ್‌ಕರ್ ಅವರಿದ್ದ ಪೀಠವು -ವಿಚಾರಣೆ ನಡೆಸಿ ಕಳೆದ ಮೇ 28ರಂದು ಈ ಕುರಿತಂತೆ ಆದೇಶ ಹೊರಡಿಸಿದೆ.


                      ಅಂದಿನ ರಾಜ್ಯ ಸರ್ಕಾರ 2022ರ ಅಕ್ಟೋಬರ್ 23ರಂದು ಹೊರಡಿಸಿದ್ದ ಸುಗ್ರಿವಾಜ್ಞೆಯು ಮೀಸಲು ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಹೆಚ್ಚಿಸಿದೆ. ಇದನ್ನು ಆಧರಿಸಿ 2022ರ ಡಿಸೆಂಬರ್ 28ರಂದು ಅಧಿಸೂಚನೆ ಪ್ರಕಟಿಸಿ ರೋಸ್ಟ‌ರ್ ಅಂಕಗಳನ್ನು ನಿಗದಿ-ಪಡಿಸಲಾಗಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಶಾಸನಸಭೆಯ ಅನುಮತಿ ಪಡೆದಿರಲಿಲ್ಲ ಎಂಬುದು ಗಮನಾರ್ಹ. ಹಾಗಾಗಿ, ಇದರ ಆಧಾರದಡಿ ರಚಿಸಲಾದ 2023ರ ನಿಯಮಾವಳಿ ಊರ್ಜಿತವಲ್ಲ' ಎಂದು ಪೀಠವು ಅಭಿಪ್ರಾಯಪಟ್ಟಿದೆ.


         ಸುಪ್ರೀಂ ಕೋರ್ಟ್‌ ಆದೇಶದ ವಿರುದ್ಧ ರಾಜಕೀಯ ಕಾರಣಕ್ಕಾಗಿ ಸರಕಾರ ಮೀಸಲು ಪ್ರಮಾಣ ಶೇ.56ಕ್ಕೆ ಹೆಚ್ಚಳ ಮಾಡಿದೆ. ಇದರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕೇವಲ ಶೇ.44ರಷ್ಟು ಮಾತ್ರ ಅವಕಾಶ ಸಿಗುತ್ತದೆ. ಇದರಿಂದ ಸಂವಿಧಾನಬದ್ಧವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಸಿಗಬೇಕಾದ ಅವಕಾಶ ಕಸಿದುಕೊಳ್ಳಲಾಗಿದೆ. ಇದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠದ ಆದೇಶದ ಉಲ್ಲಂಘನೆಯಾಗಿದೆ. ಎಂ.ಆರ್‌.ಬಾಲಾಜಿ ವರ್ಸಸ್‌ ಸ್ಟೇಟ್‌ ಆಫ್‌ ಮೈಸೂರು ಪ್ರಕರಣದಲ್ಲಿಮೀಸಲಿಗೆ ಮಿತಿ ಇರಬೇಕೆಂಬ ಸುಪ್ರೀಂಕೋರ್ಟ್‌ ಆದೇಶದ ವಿರುದ್ಧ ನಿಯಮ ರೂಪಿಸಲಾಗಿದೆ.

Comments