ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 129 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
1) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರಾಭಿವೃದ್ಧಿ ಕೋಶ ಹಾಗೂನಗರಸಭೆ - ದೊಡ್ಡಬಳ್ಳಾಪುರ, ಹೊಸಪೇಟೆ, ನೆಲಮಂಗಲಪುರಸಭೆ - ದೇವನಹಳ್ಳಿ, ವಿಜಯಪುರಪಟ್ಟಣ ಪಂಚಾಯಿತಿ - ಬಶೆಟ್ಟಿಹಳ್ಳಿ
2) ಯೋಜನಾ ನಿರ್ದೇಶಕರು, ಜಿಲ್ಲಾ ನಾಗರಾಭಿವೃದ್ಧಿಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ, 1ನೇ ಮಹಡಿ, ಬಿರಸಂಸ್ರಾ ಗ್ರಾಮ, ಕುಂದಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಪ್ರಸ್ತುತ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 /- ರಿಂದ 28,950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments