ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:12 ಎಪ್ರಿಲ್ 2021

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
ತಾಂತ್ರಿಕ ಸಹಾಯಕ (ಅರಣ್ಯ) - 03
ತಾಂತ್ರಿಕ ಸಹಾಯಕ (ಕೃಷಿ) - 04
ತಾಂತ್ರಿಕ ಸಹಾಯಕ (ತೋಟಗಾರಿಕೆ) - 03
ತಾಂತ್ರಿಕ ಸಹಾಯಕ (ಸಿವಿಲ್) - 04
ತಾಲೂಕ MIS ಸಂಯೋಜಕರು - 01
ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 26-03-2021 ರಿಂದ 12-04-2021 ರೊಳಗಾಗಿ ಅರ್ಜಿಗಳನ್ನು ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
No. of posts: 15
Application Start Date: 30 ಮಾರ್ಚ್ 2021
Application End Date: 12 ಎಪ್ರಿಲ್ 2021
Work Location: ದಾವಣಗೆರೆ ಜಿಲ್ಲಾ ವ್ಯಾಪ್ತಿ
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು BSc (Forestry / Agri / Horti ), BCA, BE (Civil) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
Pay Scale:
ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ಈ ಕೆಳಗಿನಂತೆ ವೇತನ ಪಡೆಯುವರು.
ತಾಂತ್ರಿಕ ಸಹಾಯಕ (ಅರಣ್ಯ) - 24,000/-
ತಾಂತ್ರಿಕ ಸಹಾಯಕ (ಕೃಷಿ) - 24,000/-
ತಾಂತ್ರಿಕ ಸಹಾಯಕ (ತೋಟಗಾರಿಕೆ) - 24,000/-
ತಾಂತ್ರಿಕ ಸಹಾಯಕ (ಸಿವಿಲ್) - 24,000/-
ತಾಲೂಕ MIS ಸಂಯೋಜಕರು - 18,000/-
* ಜೊತೆಗೆ ಪ್ರಯಾಣ ಭತ್ಯೆ ಪಾವತಿಸಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.





Comments