Loading..!

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:20 ಡಿಸೆಂಬರ್ 2021
not found

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ರಚಿತವಾಗಿರುವ ಒಂಬುಡ್ಸ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/01/2022 ರೋಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಂಬುಡ್ಸ್‌ಮನ್‌ ಹುದ್ದೆಗಳಿರುವ ಜಿಲ್ಲೆಗಳು:
* ಬೆಳಗಾವಿ
* ಬೆಂಗಳೂರು ಗ್ರಾಮಾಂತರ
* ಬೆಂಗಳೂರು ನಗರ
* ಶಿವಮೊಗ್ಗ
* ಚಿತ್ರದುರ್ಗ
* ಬೀದರ
* ಹಾಸನ
* ಕೊಡಗು
* ಕೊಪ್ಪಳ
* ವಿಜಯನಗರ
ಅರ್ಜಿ ಸಲ್ಲಿಸುವ ವಿಳಾಸ:  ಆಯುಕ್ತರು, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂಬರ್ 1243, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್‌, ಸೌತ್‌ ಬ್ಲಾಕ್‌, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು -560044.

Application Start Date:  20 ಡಿಸೆಂಬರ್ 2021
Application End Date:  14 ಜನವರಿ 2022
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗು ಕಾರ್ಯಾನುಭವದ ಕುರಿತು ಮಾಹಿತಿಯನ್ನು ಅಧಿಸೂಚನೆಯಲ್ಲಿ ಗಮನಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 66 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ Rs. 10,000/- to Rs. 20,000/- ವೇತನವನ್ನು ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification

Comments