Loading..!

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಓಂಬುಡ್ಸ್ ಪರ್ಸನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:15 ಮಾರ್ಚ್ 2024
not found

ಕರ್ನಾಟಕ ರಾಜ್ಯದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಖಾಲಿ ಇರುವಓಂಬುಡ್ಸ್ ಪರ್ಸನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 06-04-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಕನಿಷ್ಠ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ : 
ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ. 5ನೇ ಮಹಡಿ,
ಪ್ಲಾಟ್ ನಂ.1243. ಕೆ.ಎಸ್.ಐ.ಐ.ಡಿ.ಸಿ.ಕಟ್ಟಡ, ಐ.ಟಿ. ಪಾರ್ಕ್, ಸೌತ್ ಬ್ಲಾಕ್,
ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560010 

Application Start Date:  15 ಮಾರ್ಚ್ 2024
Application End Date:  6 ಎಪ್ರಿಲ್ 2024
Work Location:  ಕರ್ನಾಟಕ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 66 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ 10000/- ರಿಂದ 45000/- ರೂಗಳವರೆಗೆ ವೇತನ ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

To Download Official Notification

Comments