ಭಾರತೀಯ ವಾಯುಸೇನೆಯು ನೇಮಕಾತಿ ರ್ಯಾಲಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದು ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
| Date:22 ಜುಲೈ 2019

ಭಾರತೀಯ ವಾಯುಸೇನೆಯು ಜುಲೈ 17 ರಿಂದ 22 ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ವಾಯುಸೇನೆ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಿದ್ದು, ರಾಜ್ಯದ ಪುರುಷ ವಿದ್ಯಾರ್ಥಿಗಳು ಆಯಾ ಜಿಲ್ಲೆಗೆ ನಿಗದಿಪಡಿಸಿದ ದಿನಾಂಕದಂದು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಕೆ.ಎ.ದಯಾನಂದ್ ಅವರು ತಿಳಿಸಿದ್ದಾರೆ. ಜಿಲ್ಲಾವಾರು ನೇಮಕಾತಿ ನಡೆಯುವ ದಿನಾಂಕಗಳು : * ಜುಲೈ 17 ಮತ್ತು 18 ರಂದು : ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳು * ಜುಲೈ 21 ಮತ್ತು 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ,ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ( ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು,ಹಾಸನ,ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು * ಜುಲೈ 19 ಮತ್ತು 20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ * ಈ ಮೇಲೆ ತಿಳಿಸಿದಂತೆ ಆಯಾ ಜಿಲ್ಲೆಗಳ ಅಭ್ಯರ್ಥಿಗಳು ದೇಹದಾರ್ಢ್ಯ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
Application Start Date: 17 ಜುಲೈ 2019
Application End Date: 22 ಜುಲೈ 2019
Qualification: ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿ ದ್ವಿತೀಯ ಪಿಯುಸಿಯಲ್ಲಿ ಯಾವುದೇ ವಿಭಾಗದಲ್ಲಿ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಆಂಗ್ಲಭಾಷೆಯಲ್ಲಿ ಕನಿಷ್ಠ 50 ರಷ್ಟು ಅಂಕಗಳನ್ನು ಗಳಿಸಿರಬೇಕು. ನೇಮಕಾತಿಗೆ ನಿಗದಿಪಡಿಸಿದ ಎತ್ತರ ಹಾಗೂ ತೂಕ ಹೊಂದಿರಬೇಕು.
Age Limit: 1999 ರ ಜುಲೈನಿಂದ ಆರಂಭವಾಗಿ 2003 ರ ಜುಲೈ 1 ರೊಳಗಾಗಿ ಜನಿಸಿದ ಅಭ್ಯರ್ಥಿಗಳು ಆಗಿರಬೇಕು.
ಅಂದರೆ ಅಭ್ಯರ್ಥಿಗಳು ಕನಿಷ್ಠ 17 ವರ್ಷ ಮತ್ತು ಗರಿಷ್ಠ 20 ವರ್ಷ ವಯೋಮಿತಿಯೊಳಗಿನವರಾಗಿರಬೇಕು
ಅಂದರೆ ಅಭ್ಯರ್ಥಿಗಳು ಕನಿಷ್ಠ 17 ವರ್ಷ ಮತ್ತು ಗರಿಷ್ಠ 20 ವರ್ಷ ವಯೋಮಿತಿಯೊಳಗಿನವರಾಗಿರಬೇಕು
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 30,000 ಗಳ ವೇತನ ಹಾಗೂ ಭತ್ಯೆಗಳನ್ನು ನೀಡಲಾಗುವುದು
ವಿಶೇಷ ಸೂಚನೆಗಳು :
* ಅಭ್ಯರ್ಥಿಯು ತನ್ನ ವಿದ್ಯಾರ್ಹತೆಯ ಮೂಲ, ನಾಲ್ಕು ನಕಲು ಪ್ರತಿಗಳು ಹಾಗೂ 30 ಭಾವಚಿತ್ರಗಳು,ಆಧಾರ್ ಕಾರ್ಡ್ ಇತ್ಯಾದಿಗಳನ್ನು ಸಲ್ಲಿಸಬೇಕು.
* ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ, ಸೌಲಭ್ಯಗಳನ್ನು ಒದಗಿಸಲಾಗುವುದಿಲ್ಲ.
* ಶಿವಮೊಗ್ಗ ನಗರದ ನೆಹರೂ ಮೈದಾನದಲ್ಲಿಯೇ ನೇಮಕಾತಿ ರ್ಯಾಲಿ ನಡೆಯುತ್ತಿರುವುದರಿಂದ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ತರಗತಿಗಳನ್ನು ತೆಗೆದುಕೊಳ್ಳಲು ಸೂಕ್ತ ಏರ್ಪಾಡು ಮಾಡುವಂತೆ ನೇಮಕಾತಿ ರ್ಯಾಲಿ ನೋಡಲ್ ಅಧಿಕಾರಿ ಚಂದ್ರಪ್ಪ ಜವಾಬ್ದಾರಿ ವಹಿಸಿಲಾಗಿದೆ.
ವಿಶೇಷ ಸೂಚನೆಗಳು :
* ಅಭ್ಯರ್ಥಿಯು ತನ್ನ ವಿದ್ಯಾರ್ಹತೆಯ ಮೂಲ, ನಾಲ್ಕು ನಕಲು ಪ್ರತಿಗಳು ಹಾಗೂ 30 ಭಾವಚಿತ್ರಗಳು,ಆಧಾರ್ ಕಾರ್ಡ್ ಇತ್ಯಾದಿಗಳನ್ನು ಸಲ್ಲಿಸಬೇಕು.
* ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ, ಸೌಲಭ್ಯಗಳನ್ನು ಒದಗಿಸಲಾಗುವುದಿಲ್ಲ.
* ಶಿವಮೊಗ್ಗ ನಗರದ ನೆಹರೂ ಮೈದಾನದಲ್ಲಿಯೇ ನೇಮಕಾತಿ ರ್ಯಾಲಿ ನಡೆಯುತ್ತಿರುವುದರಿಂದ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ತರಗತಿಗಳನ್ನು ತೆಗೆದುಕೊಳ್ಳಲು ಸೂಕ್ತ ಏರ್ಪಾಡು ಮಾಡುವಂತೆ ನೇಮಕಾತಿ ರ್ಯಾಲಿ ನೋಡಲ್ ಅಧಿಕಾರಿ ಚಂದ್ರಪ್ಪ ಜವಾಬ್ದಾರಿ ವಹಿಸಿಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,







Comments